ನಾಗ ಪಂಚಮಿ ಕಥೆ : ಪುರಾಣ : ನಾಗ ಪಂಚಮಿಯ ವೈಶಿಷ್ಟ್ಯ: ಉಪವಾಸದ ಮಹತ್ವ:ನಾಗನ ಮಹಾತ್ಮೆ:ಪೂಜೆ
ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಇದೆ. ನಾಗ ಪಂಚಮಿ ಕಥೆ ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ನಾಗರಹಾವೊಂದು ರಭಸದಿಂದ ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು. ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು, ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ - ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಪುರಾ...