Posts

Showing posts from October, 2017

ದೀಪಾವಳಿ ಹಬ್ಬ : ತ್ರಯೋದಶಿ ದಿನ - ನೀರು ತುಂಬುವ ಹಬ್ಬ, ಚತುರ್ದಶಿ ದಿನ - ನರಕ ಚತುರ್ದಶಿ, ಅಮಾವಾಸ್ಯೆ ದಿನ - ಧನ ಲಕ್ಷ್ಮೀ ಪೂಜೆ, ಪಾಡ್ಯ ದಿನ - ಬಲಿ ಪಾಡ್ಯಮಿ /ಬಲೀಂದ್ರನ ಪೂಜೆ

Image
ದೀಪಾವಳಿ ಹಬ್ಬವನ್ನು ಆಶ್ವಯುಜ ಮಾಸದ ಕೃಷ್ಣ ಪಕ್ಷದಲ್ಲಿ ಆಚರಿಸುತ್ತೀವಿ. ದೀ ಪಾವಳಿ ಅಂದರೆ ೩-೪ ದಿನದ ಹಬ್ಬ. ತ್ರಯೋದಶಿ   ದಿನ  -  ನೀರು   ತುಂಬುವ   ಹಬ್ಬ ಚತುರ್ದಶಿ   ದಿನ  -  ನರಕ   ಚತುರ್ದಶಿ ಅಮಾವಾಸ್ಯೆ   ದಿನ  -  ಧನ   ಲಕ್ಷ್ಮೀ   ಪೂಜೆ ಪಾಡ್ಯ   ದಿನ  -  ಬಲಿ   ಪಾಡ್ಯಮಿ  / ಬಲೀಂದ್ರನ   ಪೂಜೆ ನೀರು   ತುಂಬುವ   ಹಬ್ಬ  - ಹೆಸರೇ ಹೇಳುವಂತೆ ನೀರನ್ನು ಸಂಗ್ರಹಿಸುವ ದಿನ. ಈ  ದಿನ ಸ್ನಾನದ ಮನೆ, ಬಚ್ಚಲನ್ನು ಸ್ವಚ್ಛಮಾಡಿ, ಮಾರನೆಯ ದಿನದ ಅಭ್ಯಂಜನಕ್ಕೆ ನೀರು ಹಿಡಿದು ಇಡುತ್ತಾರೆ. ಕೊಳೆಯನ್ನು ಹೋಗಿಸಿ ಮನೆಯನ್ನು ಶುಭ್ರಮಾಡುವಂತೆ , ನಮ್ಮ ಮನಸಿನಲ್ಲಿರುವ ಕೆಟ್ಟ ವಿಷಯಗಳನ್ನು ತೊಲಗಿಸಿ ನಿರ್ಮಲವಾಗಿ ಇಟ್ಟುಕೊಳ್ಳಿ ಎಂಬ ಸಂಕೇತ ಇರಬಹುದು. ಹಿಂದಿನ ಕಾಲದಲ್ಲಿ ತುಂಬಿದ ಸಂಸಾರ, ಮನೆಯಲ್ಲಿ ಬಹಳ ಜನ ಇರುತ್ತಿದ್ದರು. ಎಲ್ಲರೂ ಒಂದೇ ದಿನ  ಅಭ್ಯಂಜನ ಮಾಡಬೇಕಾದರೆ ಸಾಕಷ್ಟು ನೀರು ಮೊದಲೇ ಶೇಖರಿಸಿ ಇಡಬೇಕಿತ್ತು.ಹೀಗಾಗಿ ಈ ದಿನ ನೀರುಹಿಡಿಯುವುದರಲ್ಲೇ ಕಳೆದು ಹೋಗುತ್ತಿತ್ತು ಅನ್ನಿಸುತ್ತದೆ.ಅದಕ್ಕೆ  ಈ ದಿನವನ್ನು ನೀರು ತುಂಬುವ ಹಬ್ಬವೆಂದು ಆಚರಿಸುವ ವಾಡಿಕೆ ಬಂತೇನೋ.ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೆ :) ನರಕ  ...