ದೀಪಾವಳಿ ಹಬ್ಬ : ತ್ರಯೋದಶಿ ದಿನ - ನೀರು ತುಂಬುವ ಹಬ್ಬ, ಚತುರ್ದಶಿ ದಿನ - ನರಕ ಚತುರ್ದಶಿ, ಅಮಾವಾಸ್ಯೆ ದಿನ - ಧನ ಲಕ್ಷ್ಮೀ ಪೂಜೆ, ಪಾಡ್ಯ ದಿನ - ಬಲಿ ಪಾಡ್ಯಮಿ /ಬಲೀಂದ್ರನ ಪೂಜೆ
ದೀಪಾವಳಿ ಹಬ್ಬವನ್ನು ಆಶ್ವಯುಜ ಮಾಸದ ಕೃಷ್ಣ ಪಕ್ಷದಲ್ಲಿ ಆಚರಿಸುತ್ತೀವಿ. ದೀ ಪಾವಳಿ ಅಂದರೆ ೩-೪ ದಿನದ ಹಬ್ಬ. ತ್ರಯೋದಶಿ ದಿನ - ನೀರು ತುಂಬುವ ಹಬ್ಬ ಚತುರ್ದಶಿ ದಿನ - ನರಕ ಚತುರ್ದಶಿ ಅಮಾವಾಸ್ಯೆ ದಿನ - ಧನ ಲಕ್ಷ್ಮೀ ಪೂಜೆ ಪಾಡ್ಯ ದಿನ - ಬಲಿ ಪಾಡ್ಯಮಿ / ಬಲೀಂದ್ರನ ಪೂಜೆ ನೀರು ತುಂಬುವ ಹಬ್ಬ - ಹೆಸರೇ ಹೇಳುವಂತೆ ನೀರನ್ನು ಸಂಗ್ರಹಿಸುವ ದಿನ. ಈ ದಿನ ಸ್ನಾನದ ಮನೆ, ಬಚ್ಚಲನ್ನು ಸ್ವಚ್ಛಮಾಡಿ, ಮಾರನೆಯ ದಿನದ ಅಭ್ಯಂಜನಕ್ಕೆ ನೀರು ಹಿಡಿದು ಇಡುತ್ತಾರೆ. ಕೊಳೆಯನ್ನು ಹೋಗಿಸಿ ಮನೆಯನ್ನು ಶುಭ್ರಮಾಡುವಂತೆ , ನಮ್ಮ ಮನಸಿನಲ್ಲಿರುವ ಕೆಟ್ಟ ವಿಷಯಗಳನ್ನು ತೊಲಗಿಸಿ ನಿರ್ಮಲವಾಗಿ ಇಟ್ಟುಕೊಳ್ಳಿ ಎಂಬ ಸಂಕೇತ ಇರಬಹುದು. ಹಿಂದಿನ ಕಾಲದಲ್ಲಿ ತುಂಬಿದ ಸಂಸಾರ, ಮನೆಯಲ್ಲಿ ಬಹಳ ಜನ ಇರುತ್ತಿದ್ದರು. ಎಲ್ಲರೂ ಒಂದೇ ದಿನ ಅಭ್ಯಂಜನ ಮಾಡಬೇಕಾದರೆ ಸಾಕಷ್ಟು ನೀರು ಮೊದಲೇ ಶೇಖರಿಸಿ ಇಡಬೇಕಿತ್ತು.ಹೀಗಾಗಿ ಈ ದಿನ ನೀರುಹಿಡಿಯುವುದರಲ್ಲೇ ಕಳೆದು ಹೋಗುತ್ತಿತ್ತು ಅನ್ನಿಸುತ್ತದೆ.ಅದಕ್ಕೆ ಈ ದಿನವನ್ನು ನೀರು ತುಂಬುವ ಹಬ್ಬವೆಂದು ಆಚರಿಸುವ ವಾಡಿಕೆ ಬಂತೇನೋ.ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೆ :) ನರಕ ...